ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
Koppal ಕುಷ್ಟಗಿ ಬಳಿ ಭೀಕರ ಅಪಘಾತ ೬ ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಇಂಡಿಕಾ -ಲಾರಿ ಮಧ್ಯೆ ಅಪಘಾತ ನಡೆದಿದ್ದುಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು,ಓರ್ವ ಮಹಿಳೆ, ನಾಲ್ವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಷ್ಟಗಿ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.